ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಮತ್ತು ಇನ್ನಿತರ ಸೌಲಭ್ಯಕ್ಕಾಗಿ 27% ಮೀಸಲಾತಿ ನೀಡಿದೆ.ಆಯಾ ರಾಜ್ಯಗಳು ತಮಗೆ ಅನುಕೂಲಕರ ಪ್ರಮಾಣದಲ್ಲಿ ಕೊಟಾವನ್ನು ನಿಗದಿ ಮಾಡಿಕೊಳ್ಳಬಹುದು. ಆದರೆ ಸರ್ವೋಚ್ಚ ನ್ಯಾಯಾಲಯದ ಆ ದೇಶದ ಪ್ರಕಾರ ಈ ಮೀಸಲಾತಿ ಪ್ರಮಾಣವು ಶೇ.50 ಕ್ಕಿಂತ ಹೆಚ್ಚಾಗಬಾರದು. ಆದರೆ ಭಾರತದ ರಾಜಸ್ಥಾನದಂತಹ ರಾಜ್ಯಗಳಲ್ಲಿ ಇದು 68% ರಷ್ಟಿದೆ, ಯಾಕೆಂದರೆ ಇದರಲ್ಲಿ 14% ಪ್ರಮಾಣವನ್ನು ಮುಂದವರೆದ ಜನಾಂಗದವರಿಗೂ ಕಲ್ಪಿಸಲಾಗಿದೆ.
ನಂತರ ಈ ಮೀಸಲಾತಿಯನ್ನು ಇತರ ವರ್ಗಗಳಿಗೂ ವಿಸ್ತರಿಸಲಾಯಿತು. ಸರ್ವೋಚ್ಚ ನ್ಯಾಯಾಲಯವು ಈ ಮೀಸಲಾತಿಯು 50% ಕ್ಕಿಂತ ಹೆಚ್ಚಾಗಬಾರದೆಂಬ ನಿಯಮ ರೂಪಿಸಿ ಸಮಾನವಕಾಶದ ಮಾರ್ಗ ಸೂಚಿಸಿದೆ.(ಸಂವಿಧಾನವು ಸಮಾನ ಅವಕಾಶದ ಉಲ್ಲಂಘನೆಗೆ ಅವಕಾಶ ನೀಡಿಲ್ಲ)ಆದ್ದರಿಂದ ಮೀಸಲಾತಿ ಮೇಲೆ ಒಂದು ನಿರ್ಭಂದ ವಿಧಿಸಿದೆ. ಕೆಲವು ರಾಜ್ಯಗಳಲ್ಲಿ ಈ 50% ಪರಿಧಿಯನ್ನು ಮೀಸಲಾತಿ ನೀಡಿದ ನಿದರ್ಶನಗಳು ಇದ್ದು ಅದರ ಬಗ್ಗೆ ವಿಚಾರಣೆ-ಪ್ರಕರಣಗಳು ಸರ್ವೋಚ್ಚ ನ್ಯಾಯಾಲಯದಲ್ಲಿ ನಡೆಯುತ್ತಿವೆ. ಉದಾಹರಣೆಗೆ ತಮಿಳುನಾಡಿನಲ್ಲಿ ಈ ಮೀಸಲಾತಿ ಪ್ರಮಾಣವು 69% ಮತ್ತು 87% ರಷ್ಟನ್ನು ಆಯಾ ವರ್ಗಗಳಿಗೆ ಅನ್ವಯಿಸುವಂತೆ ನೀಡಲಾಗುತ್ತಿದೆ.
1882 - ಹಂಟರ್ ಆಯೋಗ ನೇಮಕ. ಮಹಾತ್ಮಾ ಜ್ಯೊತಿರಾವ್ ಫುಲೆ ಅವರು ಉಚಿತ ಶಿಕ್ಷಣ ಮತ್ತು ಸರ್ಕಾರಿ ಕೆಲಸಗಳಲ್ಲಿ ಅಗತ್ಯ ಮೀಸಲಾತಿ ನೀಡುವಂತೆ,ಅದು ಜಾತಿಗೆ ಸರಾಸರಿ ಪ್ರಾತಿನಿಧ್ಯ ನೀಡುವಂತೆ ಅವರು ಒತ್ತಾಯಿಸಿದರು. ಆಗ 1891-ರಲ್ಲಿ ಸರ್ಕಾರಿ ಕೆಲಸಗಳಲ್ಲಿ ಮೀಸಲಾತಿ ಬೇಕೆಂಬ ಬೇಡಿಕೆಯು 1891 ರ ಆರಂಭದಲ್ಲೇ ಕೇಳಿ ಬಂತು.ಟ್ರ್ಯಾವಂಕೂರ್ ರಾಜಮನೆತನದ ಆಡಳಿತದಲ್ಲಿ ಸ್ಥಳೀಯರಲ್ಲದವರನ್ನು ಕೆಲಸಗಳಲ್ಲಿ ನೇಮಕ ಮಾಡಿಕೊಂಡು ಸ್ಥಳೀಯ ಪ್ರತಿಭೆಗಳನ್ನು ಕಡೆಗಣಿಸಲಾಯಿತೆಂದು ಹೋರಾಟ ಮಾಡಲಾಯಿತು. ನಂತರ 1901-ರಲ್ಲಿ ಮಹಾರಾಷ್ಟ್ರದ ಕೊಲ್ಹಾಪುರ ರಾಜ ಶಾಹು ಮಹಾರಾಜರ ಆಡಳಿತದಲ್ಲಿ ಮೀಸಲಾತಿಗಳನ್ನು ಜಾರಿಗೊಳಿಸಲಾಯಿತು. ಅದಾಗಲೇ ಬರೋಡಾ ಮತ್ತು ಮೈಸೂರು ಸಂಸ್ಥಾನಗಳಲ್ಲಿ ಮೀಸಲಾತಿ ಜಾರಿಯಲ್ಲಿತ್ತು.
ಮುಂದೆ 1908- ರ ಹೊತ್ತಿಗೆ ಹಲವಾರು ಜಾತಿಗಳು ಮತ್ತು ಸಮುದಾಯಗಳಿಗೆ ಬ್ರಿಟಿಷ್ ಆಡಳಿತದಲ್ಲಿ ಕಡಿಮೆ ಪ್ರಾತಿನಿಧ್ಯದ ಇವುಗಳಿಗೆ ಮೀಸಲಾತಿ ಕಲ್ಪಿಸಲಾಯಿತು. ಹೀಗೆ 1909- ರಲ್ಲಿ ಗವರ್ಮೆಂಟ್ ಆಫ್ ಇಂಡಿಯಾ ಆಕ್ಟ್ 1909 ರ ಭಾರತೀಯ ಸರ್ಕಾರದ ಕಾನೂನಿನಲ್ಲಿ ಸವಲತ್ತುಗಳನ್ನು ಕಲ್ಪಿಸಲಾಯಿತು. ಅದರ ಹಿಂದೆಯೇ 1919 -ರಲ್ಲಿ ಮೊಂಟ್ಯಾಗು-ಚೆಲ್ಮ್ಸ್ ಫೊರ್ಡ್ ರಿಫಾರ್ಮ್ಸ್ ಅಂದರೆ ಚೆಲ್ಮ್ಸ್ ಫೊರ್ಡ್ ಅವರ ಸುಧಾರಣೆಗಳು ಜಾರಿಯಾದವು.
1919-ರಲ್ಲಿ ಗವರ್ನ್ ಮೆಂಟ್ ಆಫ್ ಇಂಡಿಯಾ ಆಕ್ಟ್ 1919 ರಲ್ಲಿ ಭಾರತೀಯ ಕಾನೂನು ರೀತ್ಯಾ ಸವಲತ್ತುಗಳನ್ನು ಒದಗಿಸುವಲ್ಲಿ ಸಫಲವಾಯಿತು. 1921-ರಲ್ಲಿ ಮದ್ರಾಸ್ ಪ್ರೆಸಿಡೆನ್ಸಿ ಕೋಮುಸಮುದಾಯಕ್ಕಾಗಿ ,ಸರ್ಕಾರಿ ಆದೇಶವೊಂದನ್ನು ಹೊರಡಿಸಿ ಬ್ರಾಹ್ಮಣೇತರರಿಗೆ ಶೇಕಡಾ 44,ಬ್ರಾಹ್ಮಣರಿಗೆ ಶೇಕಡಾ 16,ಶೇಕಡಾ 16 ಮುಸ್ಲಿಮ್ ರಿಗೆ,ಶೇಕಡಾ 16 ಆಂಗ್ಲೊಇಂಡಿಯನ್ಸ/ಕ್ರಿಶ್ಚಿಯನ್ ರಿಗೆ ಮತ್ತು ಎಂಟರ ಶೇಕಡಾವನ್ನು ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ಪ್ರಕಟಿಸಿತು. ಮುಂದೆ 1935-ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಒಂದು ಪೂನಾ ಎನ್ನುವ ಒಪ್ಪಂದ ಮಾಡಿ ಕೆಳದರ್ಜೆಯ ಮತ್ತು ತುಳಿತಕ್ಕೊಳಗಾದವರಿಗಾಗಿ ಪ್ರತ್ಯೇಕ ಮತಕ್ಷೇತ್ರಗಳ ಹಂಚಿಕೆ ಬಗ್ಗೆ ಕಾರ್ಯಕ್ರಮ ಹಾಕಿಕೊಂಡಿತು. 1935 - ರಲ್ಲಿ ಗವರ್ನೆ ಮೆಂಟ್ ಆಫ್ ಇಂಡಿಯಾ ಆಕ್ಟ್ 1935 ಇದು ಭಾರತ ಸರ್ಕಾರದ ಕಾನೂನನ್ನು ಜಾರಿಗೊಳಿಸಿತು.
1942- ರಲ್ಲಿ ಬಿ.ಆರ್ ಅಂಬೇಡ್ಕರ್ ಅವರು ಅಖಿಲ ಭಾರತ ತುಳಿತಕ್ಕೊಳಗಾದ ವರ್ಗಗಳ ಒಕ್ಕೂಟವನ್ನು ರಚಿಸಿ ಪರಿಶಿಷ್ಟ ಜಾತಿಯವರ ಮುಂದುವರಿಯುವಿಕೆಗೆ ಒತ್ತು ನೀಡಿದರು. ಅವರೂ ಕೂಡಾ ಸರ್ಕಾರಿ ಕೆಲಸ-ಸೇವೆಗಳಲ್ಲಿ ಪರಿಶಿಷ್ಟ ಜಾತಿಯವರಿಗೆ ಮೀಸಲಾತಿ ನೀಡುವಂತೆ ಬೇಡಿಕೆಯೊಡ್ಡಿದರು. 1946-ರಲ್ಲಿ 1946 ಕ್ಯಾಬಿನೆಟ್ ಮಿಶನ್ ಟು ಇಂಡಿಯಾ ತನ್ನ ನಿಯೋಗದಲ್ಲಿ ಆಯಾ ಜನಸಂಖ್ಯೆ ಅನುಪಾತಕ್ಕನುಗುಣವಾಗಿ ಪ್ರಾತಿನಿಧ್ಯ ನೀಡಲು ಆಗ್ರಹಿಸಿ ಹಲವಾರು ಶಿಫಾರಸ್ಸುಗಳನ್ನು ಮಾಡಿತು.1947-ಭಾರತ ಸ್ವಾತಂತ್ರ್ಯ ಪಡೆಯಿತು. ಡಾ.ಅಂಬೇಡ್ಕರ್ ಅವರನ್ನು ಭಾರತೀಯ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ಹೀಗೆ ಈ ಮೀಸಲಾತಿಯೆಂಬುವುದು ಹಾಗೆ ಕಾಗಗದ ಮೇಲೆ ಉಳಿಯದೆ ನೈಜವಾಗಿ ಕಾರ್ಯಚರಣೆಗೆ ಬರಬೇಕಾದ ಅಗತ್ಯವಿದೆ. ಹಾಗಾಗಿ ಈ ಮೀಸಲಾತಿ ಬರಿ ಹೆಸರಾಗಿ ಉಳಿಯದೆ , ಹಸಿರಾಗಿ ಮೂಡಿ ಬರಲಿ.............!!!